"ಕೊಪ್ಪಳದ ನೀರ್ ಸಾಬ"

ಜನತೆಗೆ ಮೂಲಭೂತ ಅವಶ್ಯಕ ಕುಡಿಯುವ ನೀರಿನ ಸೇವೆ .. ಜನತೆ ಕೆ.ಎಂ.ಸಯ್ಯದ್ ರನ್ನು ಕರೆಯುವುದು "ಕೊಪ್ಪಳದ ನೀರ್ ಸಾಬ" ಎಂದು....ಪ್ರಥಮ ಬಾರಿಗೆ ಕೊಪ್ಪಳದ ಅಟೋಡ್ರೈವರ್ ಗಳಿಗೆ ಸಮವಸ್ತ್ರ ವಿತರಣೆ.... ಅವರಿಗಾಗಿ ಅಟೋ ಸ್ಟಾಂಡ್ ನಿರ್ಮಾಣ...ಯುವ ಪ್ರತಿಭೆಗಳ ಪ್ರೋತ್ಸಾಹಕ್ಕಾಗಿ ವಿವಿದ ಆಟೋಟಗಳ ಸ್ಪರ್ಧೆಗಳ ಆಯೋಜನೆ ಮತ್ತು ಪ್ರಾಯೋಜಕತ್ವ.....ವಿವಿದ ಸಂಘ ಸಂಸ್ಥೆಗಳಿಗೆ ಧನಸಹಾಯ... ಬಡ ಮಹಿಳೆಯರಿಗೆ ಸೀರೆ ವಿತರಣೆ...

Friday, April 26, 2013

ಕೆಜೆಪಿಯಿಂದ ನಾಡಿನ ಸಮಗ್ರ ಅಭಿವೃದ್ದಿ ಸಾಧ್ಯ


ಕೊಪ್ಪಳ,ಏ.೨೫: ನಾಡಿನ ಸರ್ವಾಂಗೀಣ ಅಭಿವೃದ್ದಿಗಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಕೆಜೆಪಿ ಪಕ್ಷಕ್ಕೆ ಬೆಂಬಲಿಸಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿಕೊಡಬೇಕು. ಅಂದಾಗ ಮಾತ್ರ ನಾಡಿನ ಸಮಗ್ರ ಅಭಿವೃದ್ದಿ ಸಾಧ್ಯ ಎಂದು ಪಕ್ಷದ ಯುವ ನಾಯಕ ಮೆಹಬೂಬ್ ಮುಲ್ಲಾ ಅಭಿಪ್ರಾಯ ಪಟ್ಟರು.
ಅವರು ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ಏರ್ಪಡಿಸಿದ ಕೆಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ಪರ ಬಹಿರಂಗ ಮತಯಾಚನೆ ಸಮಾರಂಭವನ್ನುದ್ದೇಶಿಸಿ ಮಾತನಾಡುತ್ತ, ಕೆ.ಎಂ. ಸಯ್ಯದ್ ರವರು ಕಳೆದ ೩-೪ ವರ್ಷಗಳಿಂದ ಕೊಪ್ಪಳದಲ್ಲಿ ತಮ್ಮದೇಯಾದ ಚಾರಿಟೇಬಲ್ ಟ್ರಸ್ಟ್ ಸ್ಥಾಪಿಸಿಕೊಂಡು ಸಾಮಾಜಿಕ, ಶೈಕ್ಷಣಿಕ ಸೇವೆ ಮಾಡುತ್ತ ಜನಸಾಮಾನ್ಯರ ಪ್ರೀತಿ, ವಿಶ್ವಾಸಗಳಿಸುವಲ್ಲಿ ಯಶಸ್ವಿಯಾದ ಇವರು ಕೊಪ್ಪಳ ವಿಧಾನಸಭಾ ಚುನಾವಣೆ ೨೦೧೩ ರಲ್ಲಿ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಾಕಣಕ್ಕೆ ಧುಮೂಕಿದ್ದು,  ಕೊಪ್ಪಳ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ  ಪಾದಯಾತ್ರೆ ಮೂಲಕ ಮತಯಾಚನೆ ಮಾಡಿದರು.
ಕೆಜೆಪಿ ಅಭ್ಯರ್ಥಿ ಕೆ.ಎಂ.ಸಯ್ಯದ್‌ರವರು ಮಾತನಾಡುತ್ತ, ಕೊಪ್ಪಳ ವಿಧಾನಸಭಾ ಕ್ಷೇತ್ರದ ಈ ಚುನಾವಣೆ ಸವಾಲಾಗಿ ಸ್ವೀಕರಿಸಲಾಗಿದ್ದು, ಚುನಾವಣೆ ಯುದ್ದವೀರರಿಗೆ ಹಬ್ಬವೇ ಹೊರತು ಭಯವಲ್ಲ ಎಂದ ಅವರು, ಸರ್ವರ ಸಹಕಾರದೊಂದಿಗೆ ಸ್ಪರ್ಧಿಸಿರುವ ಈ ಚುನಾವಣೆಯಲ್ಲಿ ಗೆಲ್ಲುವ ಧೃಢ ವಿಶ್ವಾಸವನ್ನು ವ್ಯಕ್ತಪಡಿಸಿದರು.  ಕೆಜೆಪಿ ಪಕ್ಷದ ಮುಖಂಡರಾದ ಪ್ರಫುಲ್‌ಗೌಡ ಹುರಕಡ್ಲಿ,  ಹಾಜಿ ಸಯ್ಯದ್ ಹಜರತ್ ಪಾಷಾ ಖಾದ್ರಿ, ನೇಮಿರಾಜ ಪಾಟೀಲ್, ಪರಸಪ್ಪ ರಾಠೋಡ್, ರೈತ ಸಂಘದ ಮುಖಂಡ ಹನುಮಂತಪ್ಪ ಕಲಿಕೇರಿ, ಯಮನೂರಪ್ಪ ಹಲಗೇರಿ, ದೇವಪ್ಪ ಮಾಗಳದ, ಶ್ಯಾಮೀದ್‌ಸಾಬ ಕಿಲ್ಲೇದಾರ, ಲಕ್ಷ್ಮಣ ಕವಲೂರು, ಪ್ರಭಾಕರ ಬಡಿಗೇರ, ಬಿ.ಕೆ.ಹಿರೇಮಠ ವಕೀಲರು ಹುಲಗಿ, ಈಶ್ವರ ಲಿಂಗಾಪುರ, ಸಿ.ಎಂ.ಡಂಬಳ, ಅಬ್ದುಲ್ ಅಜೀಜ್ ಮಾನ್ವಿಕರ್, ಎಂ.ಡಿ.ಆಸೀಫ್ ಕರ್ಕಿಹಳ್ಳಿ, ಮಾರುತಿ ಮಾಗಳದ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಸಹಸ್ರಾರು ಸಂಖ್ಯೆಯಲ್ಲಿ ಮತಯಾಚನೆ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.

No comments:

Post a Comment